Categories: ತುಮಕೂರು

ರಾತ್ರಿ ವೇಳೆ ವಾಹನಗಳ ಅಡ್ಡಗಟ್ಟಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ 5 ಜನ ಆಸಾಮಿಗಳ ಬಂಧನ

ಫೆ.23ರಂದು ರಾತ್ರಿ ಸುಮಾರು 8-30 ಗಂಟೆಯಲ್ಲಿ ತುಮಕೂರಿನ ತಿಲಕ್‌ಪಾರ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರ ರಸ್ತೆಯಲ್ಲಿ ಯಾರೋ ಕೆಲವು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಬರುವ ಜನರನ್ನು ಅಡ್ಡಗಟ್ಟುತ್ತಿದ್ದಾರೆಂದು ತಿಲಕ್‌ಪಾರ್ಕ್ ಪೊಲೀಸ್ ಠಾಣಾ ಪಿ.ಎಸ್.ಐ ರವರಿಗೆ ಬಂದ ಮಾಹಿತಿ ಮೇರೆಗೆ ತತಕ್ಷಣ ಸ್ಥಳಕ್ಕೆ ಹೋಗಿ ಅವರನ್ನೆಲ್ಲಾ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿತರು ಈ ಹಿಂದೆ ಫೆ.19ರಂದು ರಾತ್ರಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಣಿಗಲ್ ಜಂಕ್ಷನ್ ಬಳಿ ರಿಂಗ್ ರಸ್ತೆಯಲ್ಲಿ ಲಾರಿಯನ್ನು ನಿಲ್ಲಿಸಿಕೊಂಡು ಮಲಗಿದ್ದ ಚಾಲಕನಿಗೆ ಚಾಕುವಿನಿಂದ ತಿವಿದು ಆತನ ಬಳಿ ಇದ್ದ ವಡವೆ, ನಗದು ಹಣ ಮತ್ತು ಮೊಬೈಲ್ ಗಳನ್ನು ಸುಲಿಗೆ ಮಾಡಿರುವುದಾಗಿ ಹಾಗೂ ಫೆ.17ರಂದು ತಿಲಕ್‌ ಪಾರ್ಕ ಪೊಲೀಸ್ ಠಾಣೆಯ ವ್ಯಾಪ್ತಿಯ ಗೋವಿಂದನಗರದಲ್ಲಿ ಹೊಸದಾಗಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮೊಬೈಲ್ ಫೋನ್‌ಗಳನ್ನು ರೈಲ್ವೆ ಕಾಮಗಾರಿಯ ಉಪಕರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

ಆರೋಪಿಗಳ ಹೆಸರು

1. ಫಯಾಜ್

2. ಮಂಜುನಾಥ @ ಮಂಜ

3. ಅಪ್ರೋಸ್ ಪಾಷ @ ಅಪ್ರೋಸ್

4. ಸುಹೇಲ್ ಪಾಷ @ ವೇಲು

5. ಖಾದ‌ರ್

ಈ ಮೇಲ್ಕಂಡ ಆರೋಪಿತರವರುಗಳಿಂದ 1,20,000/- ರೂ ಬೆಲೆಬಾಳುವ ರೈಲ್ವೆ ಟ್ರ್ಯಾಕ್ ಕಾಮಗಾರಿ ಉಪಕರಣಗಳು. 1,39,600/- ರೂ. ಬೆಲೆಬಾಳುವ 17 ಗ್ರಾಂ 450 ಮಿಲಿ ತೂಕದ ಚಿನ್ನದ ಕೊರಳ ಚೈನು, 2,500/- ರೂಪಾಯಿ ಬೆಲೆಬಾಳುವ 28 ಗ್ರಾಂ 870 ಮಿಲಿ ತೂಕದ ಬೆಳ್ಳಿಯ ಕೈ ಕಡಗ, 3000/- ಬೆಬೆ ಬಾಳುವ ಒಂದು ಕೈಗಡಿಯಾರ ಹಾಗೂ 30,000/- ರೂ ಬೆಲೆ ಬಾಳುವ 6 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago