ರಾತ್ರೋರಾತ್ರಿ ಮನಗೆ ನುಗ್ಗಿ ಮಹಿಳೆ ಮಕ್ಕಳು ಎನ್ನದೆ ಮನೆಯೊಳಗೆ ನುಗ್ಗಿ ದಾಂಧಲೆ: ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ

ಮನೆ ಮಂದಿ ಎಲ್ಲರು ಊಟ ಮಾಡಿ, ನೆಮ್ಮದಿಯಿಂದ ನಿದ್ದೆಗೆ ಜಾರಿದ್ದರು, ಮಧ್ಯರಾತ್ರಿ ಸುಮಾರು 11 ಆಗುತ್ತಿದ್ದಂತೆ ಮನೆಯ ಬಳಿ ಜೋರಾದ ಶಬ್ಧ ಕೇಳುತ್ತಿತ್ತು, ಸ್ವಲ್ಪ ಸಮಯದ ನಂತರ ಮನೆ ಬಾಗಿಲು ಬಡಿಯಲು ಪ್ರಾರಂಭ ಮಾಡಿದರು, ಯಾರು ಎಂದು ಬಾಗಿಲು ತೆಗದಿದ್ದೇ ತಡ ಮಹಿಳೆ ಮಕ್ಕಳು ಎನ್ನದೇ ಹಲ್ಲೆ ಮಾಡಿದ್ದಾರೆ. ಏಕೆ, ಯಾರಿಂದ, ಯಾರಿಗೆ ಹಲ್ಲೆ ಆಗಿದೆ ಎಂಬ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ…

ಹೌದು, ಮನೆಯ ಮುಂದೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಡಿಗೆಗಳು, ಮನೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಳೆಯ ಚೂರುಗಳು, ಈ ಎಲ್ಲಾ  ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ. ಹೌದು ರಾತ್ರಿ ಮಲಗಿದ್ದ‌ ಕುಟುಂಬದ ಮೇಲೆ ಏಕಾಏಕಿ 20ಕ್ಕೂ ಹೆಚ್ಚು ಜನರು ಮನೆಗೆ ನುಗ್ಗಿ ಮನಸ್ಸೋಯಿಚ್ಚೆ ಹಲ್ಲೆ‌ ಮಾಡಿದ್ದಾರೆ.  ಗೋಪಾಲ್ ನಾಯಕ್ ಎಂಬ ವ್ಯಕ್ತಿ ಗುಂಪು ಕಟ್ಟಿಕೊಂಡು ಏಕಾಏಕಿ ಅಶ್ವತಮ್ಮ ಮತ್ತು ಸುಬ್ರಮಣಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಇನ್ನೂ, ಇವರಿಬ್ಬರ ಜಗಳಕ್ಕೆ ಕಾರಣವಾಗಿದ್ದು ಜಮೀನಿಗೆ ಓಡಾಡುವ ರಸ್ತೆಯ ವಿಚಾರಕ್ಕೆ. ಗೋಪಾಲ್  ನಾಯಕ್ ಅವರ ಜಮೀನಿಗೆ ರಸ್ತೆ ಸಮಸ್ಯೆಯಿದ್ದು, ಸುಮಾರು ದಿನಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಈ ಹಿಂದೆಯೂ ಕೂಡ ಇದೇ ವಿಚಾರಕ್ಕೆ ದೂರು ಕೂಡ ದಾಖಲಾಗಿತ್ತು. ಇದೇ ದ್ವೇಷವನ್ನು ಇಟ್ಟುಕೊಂಡು ಈಗ ರಾತ್ರೋರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಮಹಿಳೆ ಮಕ್ಕಳು ಎನ್ನದೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಗಲಾಟೆಯಿಂದಾಗಿ ಅಶ್ವತಮ್ಮ ಮತ್ತು ಸುಬ್ರಮಣಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟಾರೆ ಕೂತು ಮಾತನಾಡಿಕೊಂಡು ಬಗೆ ಹರಿಸಿಕೊಳ್ಳಬಹುದಾದ ಸಮಸ್ಯೆಗೆ, ಜಗಳ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

8 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

12 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

12 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

14 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

16 hours ago