ಮನೆ ಮಂದಿ ಎಲ್ಲರು ಊಟ ಮಾಡಿ, ನೆಮ್ಮದಿಯಿಂದ ನಿದ್ದೆಗೆ ಜಾರಿದ್ದರು, ಮಧ್ಯರಾತ್ರಿ ಸುಮಾರು 11 ಆಗುತ್ತಿದ್ದಂತೆ ಮನೆಯ ಬಳಿ ಜೋರಾದ ಶಬ್ಧ ಕೇಳುತ್ತಿತ್ತು, ಸ್ವಲ್ಪ ಸಮಯದ ನಂತರ ಮನೆ ಬಾಗಿಲು ಬಡಿಯಲು ಪ್ರಾರಂಭ ಮಾಡಿದರು, ಯಾರು ಎಂದು ಬಾಗಿಲು ತೆಗದಿದ್ದೇ ತಡ ಮಹಿಳೆ ಮಕ್ಕಳು ಎನ್ನದೇ ಹಲ್ಲೆ ಮಾಡಿದ್ದಾರೆ. ಏಕೆ, ಯಾರಿಂದ, ಯಾರಿಗೆ ಹಲ್ಲೆ ಆಗಿದೆ ಎಂಬ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ…
ಹೌದು, ಮನೆಯ ಮುಂದೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಡಿಗೆಗಳು, ಮನೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಬಳೆಯ ಚೂರುಗಳು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡನಹಳ್ಳಿ ಬಳಿ. ಹೌದು ರಾತ್ರಿ ಮಲಗಿದ್ದ ಕುಟುಂಬದ ಮೇಲೆ ಏಕಾಏಕಿ 20ಕ್ಕೂ ಹೆಚ್ಚು ಜನರು ಮನೆಗೆ ನುಗ್ಗಿ ಮನಸ್ಸೋಯಿಚ್ಚೆ ಹಲ್ಲೆ ಮಾಡಿದ್ದಾರೆ. ಗೋಪಾಲ್ ನಾಯಕ್ ಎಂಬ ವ್ಯಕ್ತಿ ಗುಂಪು ಕಟ್ಟಿಕೊಂಡು ಏಕಾಏಕಿ ಅಶ್ವತಮ್ಮ ಮತ್ತು ಸುಬ್ರಮಣಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.
ಇನ್ನೂ, ಇವರಿಬ್ಬರ ಜಗಳಕ್ಕೆ ಕಾರಣವಾಗಿದ್ದು ಜಮೀನಿಗೆ ಓಡಾಡುವ ರಸ್ತೆಯ ವಿಚಾರಕ್ಕೆ. ಗೋಪಾಲ್ ನಾಯಕ್ ಅವರ ಜಮೀನಿಗೆ ರಸ್ತೆ ಸಮಸ್ಯೆಯಿದ್ದು, ಸುಮಾರು ದಿನಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಈ ಹಿಂದೆಯೂ ಕೂಡ ಇದೇ ವಿಚಾರಕ್ಕೆ ದೂರು ಕೂಡ ದಾಖಲಾಗಿತ್ತು. ಇದೇ ದ್ವೇಷವನ್ನು ಇಟ್ಟುಕೊಂಡು ಈಗ ರಾತ್ರೋರಾತ್ರಿ ಮನೆಗೆ ನುಗ್ಗಿ ದೌರ್ಜನ್ಯವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಮಹಿಳೆ ಮಕ್ಕಳು ಎನ್ನದೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಗಲಾಟೆಯಿಂದಾಗಿ ಅಶ್ವತಮ್ಮ ಮತ್ತು ಸುಬ್ರಮಣಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…