ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

12 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 day ago