ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

13 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

7 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

7 hours ago