ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

24 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago