ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

5 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

6 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

7 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

12 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

13 hours ago