ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್

ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದಲ್ಲದೆ ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ.

ಆಗಸ್ಟ್ 22 ರಾತ್ರಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸದ್ಯ ಇಬ್ಬರು ಕಳ್ಳರು ದೊಡ್ಡಬಳ್ಳಾಪುರ ನಗರ ಪೊಲೀಸರ ವಶದಲ್ಲಿದ್ದು ವಿಚಾರಣೆ ಮಾಡಲಾಗುತ್ತಿದೆ, ಕೆ.ಆರ್ ಪುರಂನ ಎಂ.ವಿ ಕನ್ಟ್ರಕ್ಷನ್ ರೈಲ್ವೆ ಅಂಡರ್ ಪಾಸ್ ಕಾಮಾಗಾರಿಯನ್ನ 9 ತಿಂಗಳಿಂದ ಮಾಡುತ್ತಿದ್ದು, ಕಳೆದ 3 ತಿಂಗಳಿನಿಂದ ಕಾಮಾಗಾರಿಯ ಸ್ಥಳದಲ್ಲಿ ಕಬ್ಬಿಣದ ಕಂಬಿಗಳು ಮತ್ತು ಮೋಲ್ಡ್ ಶೀಟ್ ಗಳ ಕಳ್ಳತನವಾಗುತ್ತಿತ್ತು, ಗುತ್ತಿದಾರರಾದ ರಾಮ್ ಬಾಬು ಕಳ್ಳರಿಗೆ ಕಡಿವಾಣ ಹಾಕಲು ಕಾಮಾಗಾರಿ ಸ್ಥಳದಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನ ನಿಯೋಜನೆ ಮಾಡಿದ್ದರು.

ಆಗಸ್ಟ್ 22 ರಾತ್ರಿ 2 ಗಂಟೆ ಸಮಯದಲ್ಲಿ ಟೆಂಪೋದಲ್ಲಿ ಇಬ್ಬರು ಕಳ್ಳರು ಬಂದಿದ್ದಾರೆ, ಕಾಮಾಗಾರಿ ಸ್ಥಳದಲ್ಲಿ ಟೆಂಪೋ ನಿಲ್ಲಿಸಿದ ಕಳ್ಳರು ರೈಲ್ವೆ ಇಲಾಖೆಗೆ ಸೇರಿದ ಕಬ್ಬಿಣದ ವಸ್ತುಗಳನ್ನ ಟೆಂಪೋಗೆ ತುಂಬಲು ಮುಂದಾಗಿದ್ದಾರೆ, ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಕಳ್ಳರ ಕೃತ್ಯವನ್ನ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ, ಕಳ್ಳತನ ಕೃತ್ಯದ ಬಗ್ಗೆ ಇನ್ನುಳಿದ ಸೆಕ್ಯೂರಿಟಿ ಗಾರ್ಡ್ ಗಳಿಗೆ ಹೇಳಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ, ಎಲ್ಲರು ಒಟ್ಟಾಗಿ ಕಳವು ಮಾಲು ಸಮೇತ ಇಬ್ಬರು ಕಳ್ಳರನ್ನ ಹಿಡಿದಿದ್ದಾರೆ, ನಂತರ ಪೊಲೀಸರಿಗೆ ಮಾಹಿತಿ ಮುಟ್ಟಿಸಿ ಕಳ್ಳರನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

22 minutes ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

11 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

20 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago