ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago