ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago