ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago