ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.
ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.
ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.
ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.
ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು ಎಂದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…