ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

20 minutes ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

15 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago