ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

5 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

7 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

18 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

20 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

20 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago