ರಾಮಜನ್ಮ ಭೂಮಿಯಲ್ಲಿ ಬಸಪ್ಪನಿಗೆ ಅದ್ದೂರಿ ಸ್ವಾಗತ: ಅಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾದ ಬಸಪ್ಪ…!

ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಸಪ್ಪ ಉತ್ತರಪ್ರದೇಶದ ರಾಮಜನ್ಮ‌ ಭೂಮಿಯಲ್ಲಿರುವ ಆಯೋಧ್ಯೆ ರಾಮನ ದರ್ಶನ ಪಡೆದು ಪುನೀತನಾಗಿದ್ದಾನೆ.

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.‌

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿತ್ತು.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿತ್ತು. ಆ ಬಸ್ಸಿನಲ್ಲಿ ಪಯಣ ಬೆಳೆಸಿ ಇದೀಗ ರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಂಡಿದ್ದಾನೆ. ಅದೇರೀತಿ ರಾಮ ಸೇತು ಕಲ್ಲನ್ನು ಸಹ ಅಲ್ಲಿನ ಆಡಳಿತ ಮಂಡಳಿಗೆ ಒಪ್ಪಿಸಲಾಯಿತು. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದರು. ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಅಯೋಧ್ಯೆ ರಾಮನ ದೇವಾಲಯದ ಆಡಳಿತ ಮಂಡಳಿ ಬಸಪ್ಪನಿಗೆ ಭವ್ಯ ಸ್ವಾಗತ ಕೋರಿ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿತು. ಬಸಪ್ಪನಿಗೆ ಸುಮಾರು 80 ರೀತಿಯ ವಿವಿಧ ತಿಂಡಿ‌ ತಿನಿಸುಗಳನ್ನು ನೀಡಿ ಗೌರವಿಸಲಾಯಿತು ಎಂದು ವಾಸುದೇವಾ ಚಾರ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಕರೆತಂದಿದ್ದೇವು. ದೇವರ ದರ್ಶನಕ್ಕೂ ಮೊದಲು ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಯಿತು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿತ್ತು ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago