ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ, ಇಟಾಚಿ ಯಂತ್ರದ ಮೇಲ್ಭಾಗದಿಂದ ಹಠಾತ್ತನೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಂಡೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಕ್ರಷರ್ ಸಮೀಪದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯಂತೆ, ಈ ಕಾವೇರಿ ಜಲ್ಲಿ ಕ್ರಷರ್ ಆನಂದಸ್ವಾಮಿ ಅವರಿಗೆ ಸೇರಿದ್ದು, ಪ್ರಕರಣ ಸಂಬಂಧ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುರಂತದ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಘಟನೆ ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಮೃತ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಅನುಷ್ಠಾನ ಹಾಗೂ ಸರ್ಕಾರದ ಮೇಲ್ವಿಚಾರಣೆಯ ವೈಫಲ್ಯ ಈ ದುರಂತದಿಂದ ಪ್ರಶ್ನೆಗೆ ಒಳಗಾಗಿದೆ ಎಂದು ಹೇಳಿರುವ ಅವರು, ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಮೃತರ ಕುಟುಂಬಗಳಿಗೆ ಸರ್ಕಾರ ತಕ್ಷಣ ಸಮರ್ಪಕ ಪರಿಹಾರ ಘೋಷಿಸಬೇಕು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಹಾಗೂ ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಇಂತಹ ದುರಂತಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…
ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…