ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ- ಡಿಸಿಎಂ ಡಿಕೆಶಿ

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದರು.

ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ಹೇಳಿದ್ದಾರೆ.

ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದರು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು ಎಂದು ತಿಳಿಸಿದ್ದಾರೆ.

ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago