ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದರು.
ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ಹೇಳಿದ್ದಾರೆ.
ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದರು.
ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು ಎಂದು ತಿಳಿಸಿದ್ದಾರೆ.
ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…