ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು ಎಂದರು.
ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ಹೇಳಿದ್ದಾರೆ.
ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದರು.
ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು ಎಂದು ತಿಳಿಸಿದ್ದಾರೆ.
ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…