Categories: ರಾಜ್ಯ

ರಾಮಮಂದಿರ ಉದ್ಘಾಟನೆಯಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ- ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ- ಸಿಎಂ ಸಿದ್ದರಾಮಯ್ಯ

ಜನವರಿ 22ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿರುವುದು ಜನರ ನಡುವಿನ ಐಕ್ಯತೆ, ಒಗ್ಗಟ್ಟಿನಿಂದ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ನನಗಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ. ಇದರ ಫಲಿತಾಂಶದಿಂದ ಲೋಕಸಭಾ ಚುನಾವಣೆ ಮುಂದೂಡಲಾಗುವುದಿಲ್ಲ ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು.

ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಕರ್ನಾಟಕವನ್ನು ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅವರು ಮಧ್ಯಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿಗಳಿಗೆ ವಿರೋಧ ಮಾಡಿದ್ದರು. ಈಗ ‘ವಿಕಸಿತ್ ಭಾರತ್’ ಎಂದು ವ್ಯಾನ್ ಕಳಿಸಿ ಅದರಲ್ಲಿ ಪ್ರಧಾನಮಂತ್ರಿಗಳ ಗ್ಯಾರಂಟಿ ಎಂದು ಬರೆದಿದ್ದಾರೆ. ಅದನ್ನು ಭಾರತದ ಸರ್ಕಾರ ಕಳುಹಿಸಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಈಗ ಅವರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬರಪರಿಹಾರ ನೀಡುವ ಸಂಬಂಧ ಕೇಂದ್ರವನ್ನು ಹಲವು ಬಾರಿ ಒತ್ತಾಯಿಸಿದ್ದೇವೆ. ಕೇಂದ್ರದಿಂದ 17,900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ನಮ್ಮ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್.ಡಿ.ಆರ್.ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಸುಳ್ಳು ಸುಳ್ಳು ಆರೋಪ ಮಾಡಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ. ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿಯವರು ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿದ್ದಾರೆ. ತನಿಖೆ ಮಾಡಬೇಕಾಗಿ ಬಂದರೆ ಮಾಡುತ್ತೇವೆ, ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು ಎಂದು ಹೇಳಿದ್ದಾರೆ.

ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್‌ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಗುಡುಗಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago