ರಾಮಯ್ಯನಪಾಳ್ಯ ಅಪಘಾತ ಪ್ರಕರಣ: ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ವಾಹನ ಪತ್ತೆ

ರಾಮಯ್ಯನಪಾಳ್ಯ ಅಪಘಾತ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಲಿ ಪಡೆದು ಪರಾರಿಯಾಗಿದ್ದ ಲಗೇಜ್ ಆಟೋವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪತ್ತೆ‌ ಮಾಡಿ ವಶಕ್ಕೆ ಪಡೆದಿದ್ದಾರೆ.

ಪತ್ತೆಯಾಗಿದ್ದು ಹೇಗೆ…….?

ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋ ಹಾಗೂ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…

ಕೊಡಿಗೇಹಳ್ಳಿ ಮೂಲದ ವ್ಯಕ್ತಿಯೊಬ್ಬರು ಮಗನ ಹೆಸರಿನಲ್ಲಿರುವ ತರಕಾರಿ ಹೊತ್ತು ತರುವ ಲಗೇಜ್ ಆಟೋವನ್ನು ಚಾಲನೆ ಮಾಡುತ್ತಿರುತ್ತಾರೆ. ಆರೋಪಿ ಹೆಸರಲ್ಲಿ ವಾಹನ ಚಾಲನೆ ಪರವಾನಗಿ ಹಾಗೂ ಇತರೆ ಯಾವುದೇ ದಾಖಲೆಗಳು ಇರುವುದಿಲ್ಲ ಎಂದು ತಿಳಿದುಬಂದಿದೆ.

ಇಬ್ಬರು ಯುವಕರ ತಲೆ ಹಾಗೂ ಎದೆ ಮೇಲೆ ಆಟೋ ಹರಿದಿದ್ದು, ಇದರ ಪರಿಣಾಮ ಯುವಕರು ಪ್ರಾಣಬಿಟ್ಟಿದ್ದರು. ಅಪಘಾತವಾದ ಕೂಡಲೇ ಜೀವ ಭಯದಿಂದ ಆಟೋ ಚಾಲಕ ಆಟೋ ಸಮೇತ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಪರಾರಿಯಾಗುತ್ತಾನೆ. ಸಿಸಿಟಿವಿ ಆಧಾರದ ಮೇಲೆ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಭೇಟಿ ಕೊಟ್ಟು ಪರಿಶೀಲಿಸಿದ ಪೊಲೀಸರು ಆರೋಪಿಯ ಮಗನ ವಿವರ ಪತ್ತೆಯಾಗುತ್ತದೆ. ಮಗನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಡಿಗೇಹಳ್ಳಿಯವನು ಎಂದು ಗೊತ್ತಾಗಿ ಆಟೋ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಘಟನೆ ವಿವರ…

ಅ.28ರ ಮುಂಜಾನೆ ತೂಬಗೆರೆ ಮೂಲದ ಮೂವರು ಯುವಕರು ಒಂದೇ ಬೈಕಿನಲ್ಲಿ ದೊಡ್ಡಬಳ್ಳಾಪುರದ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆಂದು ಬರುತ್ತಿದ್ದರು. ಈ ವೇಳೆ ರಾಮಯ್ಯನಪಾಳ್ಯದ ಸಮೀಪ ವಾಕಿಂಗ್ ಮಾಡುತ್ತಿದ್ದ ಅಜ್ಜಿ ಬೈಕಿಗೆ ಅಡ್ಡಬಂದಿದ್ದು, ಅಜ್ಜಿಯನ್ನು ಅಪಘಾತದಿಂದ ಪಾರು ಮಾಡಲು ಹೋಗಿ ಬೈಕ್ ಸವಾರರು ಆಯಾ ತಪ್ಪಿ ಕೆಳಗೆ ಬೀಳುತ್ತಾರೆ. ಇದೇವೇಳೆ ದೊಡ್ಡಬಳ್ಳಾಪುರದಿಂದ ತೂಬಗೆರೆ ಕಡೆಗೆ ಹೋಗುತ್ತಿದ್ದ ಲಗೇಜ್ ಆಟೋ ಇಬ್ಬರು ಯುವಕರ ಎದೆ ಹಾಗೂ ತಲೆ ಮೇಲೆ ಹರಿದಿದೆ. ತೀವ್ರ ರಕ್ತ ಸ್ರಾವದಿಂದ ತೂಬಗೆರೆ ಮೂಲದ ನಂದನ್ ಕುಮಾರ್ (22) ಮತ್ತು ದೊಡ್ಡತಿಮ್ಮನಹಳ್ಳಿ ರವಿಕುಮಾರ್(24) ಸಾವನ್ನಪ್ಪುತ್ತಾರೆ‌. ಮತ್ತೊಬ್ಬ ಯುವಕ ಹಾಗೂ ಅಜ್ಜಿಗೆ ಗಾಯಗಳಾಗಿದ್ದು, ತುಸು ಚೇತರಿಸಿಕೊಂಡಿದ್ದಾರೆ. ಅಪಘಾತವಾದ ಕೂಡಲೇ ಲಗೇಜ್ ಆಟೋ ಅಲ್ಲಿಂದ ಪರಾರಿಯಾಗುತ್ತದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋವನ್ನು ಪತ್ತೆ ಮಾಡಿ ತನಿಖೆ ಮುಂದುವರಿಸಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

16 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago