ರಾಮಯ್ಯನಪಾಳ್ಯ ಅಪಘಾತ ಪ್ರಕರಣ: ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ವಾಹನ ಪತ್ತೆ

ರಾಮಯ್ಯನಪಾಳ್ಯ ಅಪಘಾತ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಲಿ ಪಡೆದು ಪರಾರಿಯಾಗಿದ್ದ ಲಗೇಜ್ ಆಟೋವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪತ್ತೆ‌ ಮಾಡಿ ವಶಕ್ಕೆ ಪಡೆದಿದ್ದಾರೆ.

ಪತ್ತೆಯಾಗಿದ್ದು ಹೇಗೆ…….?

ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋ ಹಾಗೂ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…

ಕೊಡಿಗೇಹಳ್ಳಿ ಮೂಲದ ವ್ಯಕ್ತಿಯೊಬ್ಬರು ಮಗನ ಹೆಸರಿನಲ್ಲಿರುವ ತರಕಾರಿ ಹೊತ್ತು ತರುವ ಲಗೇಜ್ ಆಟೋವನ್ನು ಚಾಲನೆ ಮಾಡುತ್ತಿರುತ್ತಾರೆ. ಆರೋಪಿ ಹೆಸರಲ್ಲಿ ವಾಹನ ಚಾಲನೆ ಪರವಾನಗಿ ಹಾಗೂ ಇತರೆ ಯಾವುದೇ ದಾಖಲೆಗಳು ಇರುವುದಿಲ್ಲ ಎಂದು ತಿಳಿದುಬಂದಿದೆ.

ಇಬ್ಬರು ಯುವಕರ ತಲೆ ಹಾಗೂ ಎದೆ ಮೇಲೆ ಆಟೋ ಹರಿದಿದ್ದು, ಇದರ ಪರಿಣಾಮ ಯುವಕರು ಪ್ರಾಣಬಿಟ್ಟಿದ್ದರು. ಅಪಘಾತವಾದ ಕೂಡಲೇ ಜೀವ ಭಯದಿಂದ ಆಟೋ ಚಾಲಕ ಆಟೋ ಸಮೇತ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಪರಾರಿಯಾಗುತ್ತಾನೆ. ಸಿಸಿಟಿವಿ ಆಧಾರದ ಮೇಲೆ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಭೇಟಿ ಕೊಟ್ಟು ಪರಿಶೀಲಿಸಿದ ಪೊಲೀಸರು ಆರೋಪಿಯ ಮಗನ ವಿವರ ಪತ್ತೆಯಾಗುತ್ತದೆ. ಮಗನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಡಿಗೇಹಳ್ಳಿಯವನು ಎಂದು ಗೊತ್ತಾಗಿ ಆಟೋ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಘಟನೆ ವಿವರ…

ಅ.28ರ ಮುಂಜಾನೆ ತೂಬಗೆರೆ ಮೂಲದ ಮೂವರು ಯುವಕರು ಒಂದೇ ಬೈಕಿನಲ್ಲಿ ದೊಡ್ಡಬಳ್ಳಾಪುರದ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆಂದು ಬರುತ್ತಿದ್ದರು. ಈ ವೇಳೆ ರಾಮಯ್ಯನಪಾಳ್ಯದ ಸಮೀಪ ವಾಕಿಂಗ್ ಮಾಡುತ್ತಿದ್ದ ಅಜ್ಜಿ ಬೈಕಿಗೆ ಅಡ್ಡಬಂದಿದ್ದು, ಅಜ್ಜಿಯನ್ನು ಅಪಘಾತದಿಂದ ಪಾರು ಮಾಡಲು ಹೋಗಿ ಬೈಕ್ ಸವಾರರು ಆಯಾ ತಪ್ಪಿ ಕೆಳಗೆ ಬೀಳುತ್ತಾರೆ. ಇದೇವೇಳೆ ದೊಡ್ಡಬಳ್ಳಾಪುರದಿಂದ ತೂಬಗೆರೆ ಕಡೆಗೆ ಹೋಗುತ್ತಿದ್ದ ಲಗೇಜ್ ಆಟೋ ಇಬ್ಬರು ಯುವಕರ ಎದೆ ಹಾಗೂ ತಲೆ ಮೇಲೆ ಹರಿದಿದೆ. ತೀವ್ರ ರಕ್ತ ಸ್ರಾವದಿಂದ ತೂಬಗೆರೆ ಮೂಲದ ನಂದನ್ ಕುಮಾರ್ (22) ಮತ್ತು ದೊಡ್ಡತಿಮ್ಮನಹಳ್ಳಿ ರವಿಕುಮಾರ್(24) ಸಾವನ್ನಪ್ಪುತ್ತಾರೆ‌. ಮತ್ತೊಬ್ಬ ಯುವಕ ಹಾಗೂ ಅಜ್ಜಿಗೆ ಗಾಯಗಳಾಗಿದ್ದು, ತುಸು ಚೇತರಿಸಿಕೊಂಡಿದ್ದಾರೆ. ಅಪಘಾತವಾದ ಕೂಡಲೇ ಲಗೇಜ್ ಆಟೋ ಅಲ್ಲಿಂದ ಪರಾರಿಯಾಗುತ್ತದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋವನ್ನು ಪತ್ತೆ ಮಾಡಿ ತನಿಖೆ ಮುಂದುವರಿಸಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago