ರಾಮಯ್ಯನಪಾಳ್ಯ ಅಪಘಾತ ಪ್ರಕರಣ: ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ವಾಹನ ಪತ್ತೆ

ರಾಮಯ್ಯನಪಾಳ್ಯ ಅಪಘಾತ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಲಿ ಪಡೆದು ಪರಾರಿಯಾಗಿದ್ದ ಲಗೇಜ್ ಆಟೋವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪತ್ತೆ‌ ಮಾಡಿ ವಶಕ್ಕೆ ಪಡೆದಿದ್ದಾರೆ.

ಪತ್ತೆಯಾಗಿದ್ದು ಹೇಗೆ…….?

ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋ ಹಾಗೂ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…

ಕೊಡಿಗೇಹಳ್ಳಿ ಮೂಲದ ವ್ಯಕ್ತಿಯೊಬ್ಬರು ಮಗನ ಹೆಸರಿನಲ್ಲಿರುವ ತರಕಾರಿ ಹೊತ್ತು ತರುವ ಲಗೇಜ್ ಆಟೋವನ್ನು ಚಾಲನೆ ಮಾಡುತ್ತಿರುತ್ತಾರೆ. ಆರೋಪಿ ಹೆಸರಲ್ಲಿ ವಾಹನ ಚಾಲನೆ ಪರವಾನಗಿ ಹಾಗೂ ಇತರೆ ಯಾವುದೇ ದಾಖಲೆಗಳು ಇರುವುದಿಲ್ಲ ಎಂದು ತಿಳಿದುಬಂದಿದೆ.

ಇಬ್ಬರು ಯುವಕರ ತಲೆ ಹಾಗೂ ಎದೆ ಮೇಲೆ ಆಟೋ ಹರಿದಿದ್ದು, ಇದರ ಪರಿಣಾಮ ಯುವಕರು ಪ್ರಾಣಬಿಟ್ಟಿದ್ದರು. ಅಪಘಾತವಾದ ಕೂಡಲೇ ಜೀವ ಭಯದಿಂದ ಆಟೋ ಚಾಲಕ ಆಟೋ ಸಮೇತ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಪರಾರಿಯಾಗುತ್ತಾನೆ. ಸಿಸಿಟಿವಿ ಆಧಾರದ ಮೇಲೆ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಭೇಟಿ ಕೊಟ್ಟು ಪರಿಶೀಲಿಸಿದ ಪೊಲೀಸರು ಆರೋಪಿಯ ಮಗನ ವಿವರ ಪತ್ತೆಯಾಗುತ್ತದೆ. ಮಗನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಡಿಗೇಹಳ್ಳಿಯವನು ಎಂದು ಗೊತ್ತಾಗಿ ಆಟೋ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಘಟನೆ ವಿವರ…

ಅ.28ರ ಮುಂಜಾನೆ ತೂಬಗೆರೆ ಮೂಲದ ಮೂವರು ಯುವಕರು ಒಂದೇ ಬೈಕಿನಲ್ಲಿ ದೊಡ್ಡಬಳ್ಳಾಪುರದ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆಂದು ಬರುತ್ತಿದ್ದರು. ಈ ವೇಳೆ ರಾಮಯ್ಯನಪಾಳ್ಯದ ಸಮೀಪ ವಾಕಿಂಗ್ ಮಾಡುತ್ತಿದ್ದ ಅಜ್ಜಿ ಬೈಕಿಗೆ ಅಡ್ಡಬಂದಿದ್ದು, ಅಜ್ಜಿಯನ್ನು ಅಪಘಾತದಿಂದ ಪಾರು ಮಾಡಲು ಹೋಗಿ ಬೈಕ್ ಸವಾರರು ಆಯಾ ತಪ್ಪಿ ಕೆಳಗೆ ಬೀಳುತ್ತಾರೆ. ಇದೇವೇಳೆ ದೊಡ್ಡಬಳ್ಳಾಪುರದಿಂದ ತೂಬಗೆರೆ ಕಡೆಗೆ ಹೋಗುತ್ತಿದ್ದ ಲಗೇಜ್ ಆಟೋ ಇಬ್ಬರು ಯುವಕರ ಎದೆ ಹಾಗೂ ತಲೆ ಮೇಲೆ ಹರಿದಿದೆ. ತೀವ್ರ ರಕ್ತ ಸ್ರಾವದಿಂದ ತೂಬಗೆರೆ ಮೂಲದ ನಂದನ್ ಕುಮಾರ್ (22) ಮತ್ತು ದೊಡ್ಡತಿಮ್ಮನಹಳ್ಳಿ ರವಿಕುಮಾರ್(24) ಸಾವನ್ನಪ್ಪುತ್ತಾರೆ‌. ಮತ್ತೊಬ್ಬ ಯುವಕ ಹಾಗೂ ಅಜ್ಜಿಗೆ ಗಾಯಗಳಾಗಿದ್ದು, ತುಸು ಚೇತರಿಸಿಕೊಂಡಿದ್ದಾರೆ. ಅಪಘಾತವಾದ ಕೂಡಲೇ ಲಗೇಜ್ ಆಟೋ ಅಲ್ಲಿಂದ ಪರಾರಿಯಾಗುತ್ತದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋವನ್ನು ಪತ್ತೆ ಮಾಡಿ ತನಿಖೆ ಮುಂದುವರಿಸಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

42 minutes ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

11 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

14 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago