ರಾಮಯ್ಯನಪಾಳ್ಯ ಅಪಘಾತ ಪ್ರಕರಣ: ಇಬ್ಬರು ಯುವಕರನ್ನು ಬಲಿ ಪಡೆದು ಎಸ್ಕೇಪ್ ಆಗಿದ್ದ ವಾಹನ ಪತ್ತೆ

ರಾಮಯ್ಯನಪಾಳ್ಯ ಅಪಘಾತ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಲಿ ಪಡೆದು ಪರಾರಿಯಾಗಿದ್ದ ಲಗೇಜ್ ಆಟೋವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪತ್ತೆ‌ ಮಾಡಿ ವಶಕ್ಕೆ ಪಡೆದಿದ್ದಾರೆ.

ಪತ್ತೆಯಾಗಿದ್ದು ಹೇಗೆ…….?

ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋ ಹಾಗೂ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…

ಕೊಡಿಗೇಹಳ್ಳಿ ಮೂಲದ ವ್ಯಕ್ತಿಯೊಬ್ಬರು ಮಗನ ಹೆಸರಿನಲ್ಲಿರುವ ತರಕಾರಿ ಹೊತ್ತು ತರುವ ಲಗೇಜ್ ಆಟೋವನ್ನು ಚಾಲನೆ ಮಾಡುತ್ತಿರುತ್ತಾರೆ. ಆರೋಪಿ ಹೆಸರಲ್ಲಿ ವಾಹನ ಚಾಲನೆ ಪರವಾನಗಿ ಹಾಗೂ ಇತರೆ ಯಾವುದೇ ದಾಖಲೆಗಳು ಇರುವುದಿಲ್ಲ ಎಂದು ತಿಳಿದುಬಂದಿದೆ.

ಇಬ್ಬರು ಯುವಕರ ತಲೆ ಹಾಗೂ ಎದೆ ಮೇಲೆ ಆಟೋ ಹರಿದಿದ್ದು, ಇದರ ಪರಿಣಾಮ ಯುವಕರು ಪ್ರಾಣಬಿಟ್ಟಿದ್ದರು. ಅಪಘಾತವಾದ ಕೂಡಲೇ ಜೀವ ಭಯದಿಂದ ಆಟೋ ಚಾಲಕ ಆಟೋ ಸಮೇತ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಪರಾರಿಯಾಗುತ್ತಾನೆ. ಸಿಸಿಟಿವಿ ಆಧಾರದ ಮೇಲೆ ಚಿಕ್ಕಬಳ್ಳಾಪುರದ ಆರ್ ಎಂಸಿಗೆ ಭೇಟಿ ಕೊಟ್ಟು ಪರಿಶೀಲಿಸಿದ ಪೊಲೀಸರು ಆರೋಪಿಯ ಮಗನ ವಿವರ ಪತ್ತೆಯಾಗುತ್ತದೆ. ಮಗನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಡಿಗೇಹಳ್ಳಿಯವನು ಎಂದು ಗೊತ್ತಾಗಿ ಆಟೋ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಘಟನೆ ವಿವರ…

ಅ.28ರ ಮುಂಜಾನೆ ತೂಬಗೆರೆ ಮೂಲದ ಮೂವರು ಯುವಕರು ಒಂದೇ ಬೈಕಿನಲ್ಲಿ ದೊಡ್ಡಬಳ್ಳಾಪುರದ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆಂದು ಬರುತ್ತಿದ್ದರು. ಈ ವೇಳೆ ರಾಮಯ್ಯನಪಾಳ್ಯದ ಸಮೀಪ ವಾಕಿಂಗ್ ಮಾಡುತ್ತಿದ್ದ ಅಜ್ಜಿ ಬೈಕಿಗೆ ಅಡ್ಡಬಂದಿದ್ದು, ಅಜ್ಜಿಯನ್ನು ಅಪಘಾತದಿಂದ ಪಾರು ಮಾಡಲು ಹೋಗಿ ಬೈಕ್ ಸವಾರರು ಆಯಾ ತಪ್ಪಿ ಕೆಳಗೆ ಬೀಳುತ್ತಾರೆ. ಇದೇವೇಳೆ ದೊಡ್ಡಬಳ್ಳಾಪುರದಿಂದ ತೂಬಗೆರೆ ಕಡೆಗೆ ಹೋಗುತ್ತಿದ್ದ ಲಗೇಜ್ ಆಟೋ ಇಬ್ಬರು ಯುವಕರ ಎದೆ ಹಾಗೂ ತಲೆ ಮೇಲೆ ಹರಿದಿದೆ. ತೀವ್ರ ರಕ್ತ ಸ್ರಾವದಿಂದ ತೂಬಗೆರೆ ಮೂಲದ ನಂದನ್ ಕುಮಾರ್ (22) ಮತ್ತು ದೊಡ್ಡತಿಮ್ಮನಹಳ್ಳಿ ರವಿಕುಮಾರ್(24) ಸಾವನ್ನಪ್ಪುತ್ತಾರೆ‌. ಮತ್ತೊಬ್ಬ ಯುವಕ ಹಾಗೂ ಅಜ್ಜಿಗೆ ಗಾಯಗಳಾಗಿದ್ದು, ತುಸು ಚೇತರಿಸಿಕೊಂಡಿದ್ದಾರೆ. ಅಪಘಾತವಾದ ಕೂಡಲೇ ಲಗೇಜ್ ಆಟೋ ಅಲ್ಲಿಂದ ಪರಾರಿಯಾಗುತ್ತದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಫೂಟೇಜ್ ಆಧಾರದ ಮೇಲೆ ಗುದ್ದೋಡೋಗಿದ್ದ ಆಟೋವನ್ನು ಪತ್ತೆ ಮಾಡಿ ತನಿಖೆ ಮುಂದುವರಿಸಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago