ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ  ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು  ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.

ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು  ಪ್ರತಿಬಿಂಬಿಸುವ  ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ.  ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು  ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು.   ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ  ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ.  ಮಹತ್ವವನ್ನು  ವಿದ್ಯಾರ್ಥಿಗಳು  ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ  ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್,  ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

14 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

14 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago