ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ  ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು  ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.

ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು  ಪ್ರತಿಬಿಂಬಿಸುವ  ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ.  ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು  ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು.   ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ  ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ.  ಮಹತ್ವವನ್ನು  ವಿದ್ಯಾರ್ಥಿಗಳು  ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ  ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್,  ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

10 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

10 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

13 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

21 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

23 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago