ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.
ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು. ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ. ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…