ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ  ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು  ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.

ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು  ಪ್ರತಿಬಿಂಬಿಸುವ  ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ.  ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು  ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು.   ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ  ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ.  ಮಹತ್ವವನ್ನು  ವಿದ್ಯಾರ್ಥಿಗಳು  ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ  ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್,  ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

17 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago