ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.
ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು. ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ. ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…