ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ  ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು  ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.

ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು  ಪ್ರತಿಬಿಂಬಿಸುವ  ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ.  ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು  ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು.   ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ  ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ.  ಮಹತ್ವವನ್ನು  ವಿದ್ಯಾರ್ಥಿಗಳು  ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ  ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರೇರಣಾ ಸಂಸ್ಥೆ ಅಧ್ಯಕ್ಷೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಉಪಾಧ್ಯಕ್ಷೆ ಶ್ಯಾಮಲಾ, ಮಾಜಿ ಅಧ್ಯಕ್ಷ  ಕೃಷ್ಣಮೂರ್ತಿ, ಸದಸ್ಯ ನಾರಾಯಣಸ್ವಾಮಿ, ಯೋಗನರಸಿಂಹಮೂರ್ತಿ, ಭಾಸ್ಕರ್, ಯಲ್ಲಪ್ಪಭರಣ್ಣನವರ್, ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪವನ್,  ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago