ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ ಈರಣ್ಣ ಸಬರದ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ಕವಿಗಳ ಕವಿ ಮತ್ತು ಭುವನದ ಭಾಗ್ಯ ಎಂದು ಕನ್ನಡದ ಕವಿಗಳು ಪ್ರಶಂಸೆ ಮಾಡಿದ್ದಾರೆ. ರಾಮಯಾಣದ ಕಥೆ ಜಾನಪದ ಮತ್ತು ಶಿಷ್ಟಸಾಹಿತ್ಯ ಎರಡರಲ್ಲೂ ಇದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಲವಕುಶರಿಗೆ ಶಿಕ್ಷಣ ನೀಡುವ ಶಿಕ್ಷಣ ತಜ್ಞರು ವಾಲ್ಮೀಕಿ. ಲವಕುಶರು ಶ್ರೇಷ್ಠ ಗಾಯನದ ಮೂಲಕ ರಾಮಾಯಣವನ್ನು ಹಾಡುತ್ತಾರೆ. ರಾಮಾಯಣ ಕಾವ್ಯದ ಮೂಲಕ ಸುಖ-ದುಃಖಗಳನ್ನು ಬದುಕಿನ ಭಾಗ ಎಂಬ ಸಂದೇಶ ನೀಡಲಾಗಿದೆ ಎಂದರು.
ರಾಮಾಯಣ ಕಾವ್ಯ ಮೊದಲ ಎರಡು ಸಾಲುಗಳು ಶೋಕದಿಂದ ಶ್ಲೋಕವಾದ ಸಾಲುಗಳು. ಇಂದು ರಾಮಾಯಣ ಕಾವ್ಯ ಭಾರತದ ಎಲ್ಲಾ ಭಾಷೆಗಳ ಜೊತೆಗೆ ವಿದೇಶ ಭಾಷೆಗಳಲ್ಲಿ ಇವೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ಮುಖ್ಯ ಶಿಕ್ಷಕರಾದ ಆರ್.ನಾರಾಯಣಸ್ವಾಮಿ ಮಾತನಾಡಿ, ರಾಮಾಯಣ ಮಹಾಕಾವ್ಯ ಜೀವನಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ಸಾಹಿತ್ಯ ಕೃತಿಗಳು ವಿದ್ಯಾರ್ಥಿಗಳಿಗೆ ಎಂದಿಗೂ ಮಾರ್ಗದರ್ಶನ ನೀಡುತ್ತವೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಧ್ಯಯನವನ್ನು ನಿರಂತರವಾಗಿ ಮಾಡಬೇಕು. ವಿದ್ಯಾರ್ಥಿಗಳು ವಿನಯದೊಂದಿಗೆ ವಿದ್ಯೆಯನ್ನು ಕಲಿಯಬೇಕು. ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನ ನೀಡಬೇಕು. ಸಾಧನೆ ಮಾಡುವ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ. ಮಹತ್ವವನ್ನು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ನೀಡುವ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕೆಂದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…