ರಾಮಾಯಣ ಮಹಾಕಾವ್ಯ ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಕಾವ್ಯವಾಗಿದೆ. ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಾಣಬಹುದಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯ ಓದುವ ಮೂಲಕ ಸಹೃದಯರು ಬದುಕಿನ ಸತ್ಯಗಳನ್ನು ಅರಿಯಬೇಕಾಗಿದೆ. ರಾಮಾಯಣ ಕಾವ್ಯದ ಮೂಲಕ ಸುಖ ದುಃಖಗಳು ಮನುಷ್ಯನ ಬದುಕಿನ ಭಾಗ ಎನ್ನುವ ಸಂದೇಶ ನೀಡಲಾಗಿದೆ ಎಂದರು.
ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಗುರುವಾಗಿ, ಕವಿಯಾಗಿ ಭಾರತೀಯರಿಗೆ ಸ್ಫೂರ್ತಿಯಾಗಿದೆ. ವಾಲ್ಮೀಕಿ ರಾಮಾಯಣ ರಾಮನ ಪಯಣದ ಕಥೆಯಾಗಿದೆ. ಸದ್ಗುಣ ಮತ್ತು ದುರ್ಗುಣ ನಡುವಿನ ಸಂಘರ್ಷದಲ್ಲಿ ಸದ್ಗುಣಕ್ಕೆ ಜನಮನ್ನಣೆ ಮತ್ತು ಜಯವಿದೆ ಎಂಬ ಸಂದೇಶ ಕಾವ್ಯದಲ್ಲಿದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲೆ ವಾಲ್ಮೀಕಿ ಮತ್ತು ರಾಯಾಯಣ ಕಾವ್ಯದ ಪ್ರಭಾವ ಇದೆ. ರಾಮಾಯಣ ಬರೀ ರಾಜರ ಕಥೆಗಷ್ಟೇ ಸೀಮಿತವಾಗಿಲ್ಲ. ಧಾರ್ಮಿಕ ಮತ್ತು ಸಾಮಾಜಿಕ ವಿಚಾರಗಳನ್ನು ಒಳಗೊಂಡ ಕಾವ್ಯವಾಗಿದೆ. ರಾಮಾಯಣ ಕಾವ್ಯ ಹಲವು ವೈಶಿಷ್ಟ್ಯಗಳಿಂದ ಶತಶತಮಾನಗಳಿಂದ ಜನಪ್ರಿಯ ಕಾವ್ಯವಾಗಿದೆ. ವಾಲ್ಮೀಕಿ ಅವರು ಕವಿಗಳಿಗೆ ಸಾರ್ವಭೌಮ ಆಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ಸಫೀರ್, ಭಾರತ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಮುನಿರತ್ನಮ್ಮ ಮುಂತಾದವರು ಭಾಗವಹಿಸಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…