ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ಅವರು ಚೆನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಚೆನೈಗೆ ತೆರಳಲಿದ್ದು, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್. ವಿ. ಪ್ರವೀಣ್ ಕುಮಾರ್ ಸಂಘದ ಪರವಾಗಿ ಅವರಿಗೆ ಹುರಿದುಂಬಿಸಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ಪರವಾಗಿ ಆರ್ಥಿಕವಾಗಿ ಸಹಾಯವಾಗಲೆಂದು ಪ್ರೋತ್ಸಹ ಧನದ ಚೆಕ್ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಕಾಲೇಜಿನಲ್ಲಿ ಖೋಖೊ ಹಾಗೂ ಕಬಡ್ಡಿ ಕ್ರೀಡೆಗಳನ್ನು ಆಯೋಜಿಸುವುದಾಗಿ ತಿಳಿಸಿದರು. ಇನ್ನೂ ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ, ರಾಮ ಚಂದ್ರ ಗೌಡ, ಪ್ರಾಧ್ಯಾಪಕ ಶ್ರೀನಿವಾಸ್, ಸಂಘದ ಖಜಾಂಜಿ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.