ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವ್ಹೆಂಬರ್. 04 ರಿಂದ ನವ್ಹೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಬಿಡುಗಡೆಗೊಳಿಸಿದರು.
ಜಿಲ್ಲೆಯಾದ್ಯಂತ ಕುಷ್ಠರೋಗ ಲಕ್ಷಣ ಕಂಡು ಬರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ರೋಗಗಳ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ, ವಿಶ್ವಸಂಸ್ಥೆಯ ಸರ್ವೆಕ್ಷಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಹೇಮಾವತಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸೀಮಾ ಮಾಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…