ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ

ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.

ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.

ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.

Ramesh Babu

Journalist

Recent Posts

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

3 minutes ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

11 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

13 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

23 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago