ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ

ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.

ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.

ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

4 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago