ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.
ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.
ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.
ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…