ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ

ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.

ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.

ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

10 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago