ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ

ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.

ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.

ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

9 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago