ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಿ. ಪೋಲಿಯೋ ಹನಿ ಪಡೆಯದಿಲ್ಲದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.
ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ.
ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.
ಜಿಲ್ಲೆಯಾದ್ಯಂತ ಒಟ್ಟು 476 ಬೂತ್ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ / ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಬಯಪ್ಪ ನಿರ್ದೇಶಕರಾದ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಸೀಮಾ ರುದ್ರಪ್ಪ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರ ವೆಂಕಟೇಶ್ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…