ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಿ. ಪೋಲಿಯೋ ಹನಿ ಪಡೆಯದಿಲ್ಲದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.

ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ.

ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.

ಜಿಲ್ಲೆಯಾದ್ಯಂತ ಒಟ್ಟು 476 ಬೂತ್‌ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ / ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಬಯಪ್ಪ ನಿರ್ದೇಶಕರಾದ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಸೀಮಾ ರುದ್ರಪ್ಪ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರ ವೆಂಕಟೇಶ್ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

3 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

3 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

8 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

14 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

15 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago