ರಾಷ್ಟ್ರೀಯ ಯುವ ದಿನಾಚರಣೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಾಗರಕೆರೆವರೆಗೆ ಸೈಕಲ್ ಜಾಥಾ

ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ‌ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ  ಮಾಡಲಾಗುತ್ತದೆ. ಈ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪಿ.ಯು ಮತ್ತು ಪದವಿ ಕಾಲೇಜಿನ N. C. C. ವಿದ್ಯಾರ್ಥಿಗಳು ಹಾಗೂ 5 ಕರ್ನಾಟಕ ಬೆಟಲಿಯನ್ NCC ವತಿಯಿಂದ ಬೆಳಗ್ಗೆ 10ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದಗೊಂಡನಹಳ್ಳಿಯಿಂದ ನಾಗರಕೆರೆವರೆಗೆ ಸುಮಾರು ಕಿಮೀ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಸೈಕಲ್ ಜಾಥಾಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ, ಶ್ರೀ ಕೊಂಡಾಡಿಯಪ್ಪ ಪಿ.ಯು ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರು, NCC ಲೆಫ್ಟಿನೆಂಟ್ ಪ್ರವೀಣ್, ಡಾ.ರಾಜಕುಮಾರ್, ಮತ್ತು ಶ್ರೀಕಾಂತ್ ಹಾಗೂ 5 ಕರ್ನಾಟಕ NCC ಬೆಟಲಿಯನ್ ಅಧಿಕಾರಿಗಳು ಚಾಲನೆ ನೀಡಿದರು.

ಯುವ ಜನತೆಗೆ ಅರೋಗ್ಯ ಕುರಿತು ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಸೈಕಲ್ ಜಾಥಾ ನಡೆಸಲಾಗಿದೆ. ಪ್ರಸ್ತುತ ಜೀವನ ಶೈಲಿಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ಕಾಯಿಲೆಗಳಿಂದ ನರಳುವಂತಾಗಿದೆ. ಮಾನಸಿಕ ಖಿನ್ನತೆ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಎದುರಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೈಸಿಕಲ್‌ ತುಳಿಯುವ ಹವ್ಯಾಸ ಬೆಳೆಸಿಕೊಂಡರೆ ದೈಹಿಕವಾಗಿ ಸದೃಢರಾಗುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಪಡೆಯಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ ಸಲಹೆ ನೀಡಿದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

21 minutes ago

ಇಂದಿನಿಂದ “ದೊಡ್ಡಬಳ್ಳಾಪುರ ಸೀರೆ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

3 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

7 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

7 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

14 hours ago