ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪಿ.ಯು ಮತ್ತು ಪದವಿ ಕಾಲೇಜಿನ N. C. C. ವಿದ್ಯಾರ್ಥಿಗಳು ಹಾಗೂ 5 ಕರ್ನಾಟಕ ಬೆಟಲಿಯನ್ NCC ವತಿಯಿಂದ ಬೆಳಗ್ಗೆ 10ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದಗೊಂಡನಹಳ್ಳಿಯಿಂದ ನಾಗರಕೆರೆವರೆಗೆ ಸುಮಾರು ಕಿಮೀ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.
ಯುವ ಜನತೆಗೆ ಅರೋಗ್ಯ ಕುರಿತು ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಸೈಕಲ್ ಜಾಥಾ ನಡೆಸಲಾಗಿದೆ. ಪ್ರಸ್ತುತ ಜೀವನ ಶೈಲಿಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ಕಾಯಿಲೆಗಳಿಂದ ನರಳುವಂತಾಗಿದೆ. ಮಾನಸಿಕ ಖಿನ್ನತೆ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಎದುರಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೈಸಿಕಲ್ ತುಳಿಯುವ ಹವ್ಯಾಸ ಬೆಳೆಸಿಕೊಂಡರೆ ದೈಹಿಕವಾಗಿ ಸದೃಢರಾಗುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಪಡೆಯಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…