ರಾಷ್ಟ್ರೀಯ ಯುವ ದಿನಾಚರಣೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಾಗರಕೆರೆವರೆಗೆ ಸೈಕಲ್ ಜಾಥಾ

ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ‌ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ  ಮಾಡಲಾಗುತ್ತದೆ. ಈ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪಿ.ಯು ಮತ್ತು ಪದವಿ ಕಾಲೇಜಿನ N. C. C. ವಿದ್ಯಾರ್ಥಿಗಳು ಹಾಗೂ 5 ಕರ್ನಾಟಕ ಬೆಟಲಿಯನ್ NCC ವತಿಯಿಂದ ಬೆಳಗ್ಗೆ 10ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದಗೊಂಡನಹಳ್ಳಿಯಿಂದ ನಾಗರಕೆರೆವರೆಗೆ ಸುಮಾರು ಕಿಮೀ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

ಸೈಕಲ್ ಜಾಥಾಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ, ಶ್ರೀ ಕೊಂಡಾಡಿಯಪ್ಪ ಪಿ.ಯು ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರು, NCC ಲೆಫ್ಟಿನೆಂಟ್ ಪ್ರವೀಣ್, ಡಾ.ರಾಜಕುಮಾರ್, ಮತ್ತು ಶ್ರೀಕಾಂತ್ ಹಾಗೂ 5 ಕರ್ನಾಟಕ NCC ಬೆಟಲಿಯನ್ ಅಧಿಕಾರಿಗಳು ಚಾಲನೆ ನೀಡಿದರು.

ಯುವ ಜನತೆಗೆ ಅರೋಗ್ಯ ಕುರಿತು ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಸೈಕಲ್ ಜಾಥಾ ನಡೆಸಲಾಗಿದೆ. ಪ್ರಸ್ತುತ ಜೀವನ ಶೈಲಿಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ಕಾಯಿಲೆಗಳಿಂದ ನರಳುವಂತಾಗಿದೆ. ಮಾನಸಿಕ ಖಿನ್ನತೆ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಎದುರಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೈಸಿಕಲ್‌ ತುಳಿಯುವ ಹವ್ಯಾಸ ಬೆಳೆಸಿಕೊಂಡರೆ ದೈಹಿಕವಾಗಿ ಸದೃಢರಾಗುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಪಡೆಯಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ ಸಲಹೆ ನೀಡಿದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago