ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪಿ.ಯು ಮತ್ತು ಪದವಿ ಕಾಲೇಜಿನ N. C. C. ವಿದ್ಯಾರ್ಥಿಗಳು ಹಾಗೂ 5 ಕರ್ನಾಟಕ ಬೆಟಲಿಯನ್ NCC ವತಿಯಿಂದ ಬೆಳಗ್ಗೆ 10ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದಗೊಂಡನಹಳ್ಳಿಯಿಂದ ನಾಗರಕೆರೆವರೆಗೆ ಸುಮಾರು ಕಿಮೀ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.
ಯುವ ಜನತೆಗೆ ಅರೋಗ್ಯ ಕುರಿತು ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಸೈಕಲ್ ಜಾಥಾ ನಡೆಸಲಾಗಿದೆ. ಪ್ರಸ್ತುತ ಜೀವನ ಶೈಲಿಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ಕಾಯಿಲೆಗಳಿಂದ ನರಳುವಂತಾಗಿದೆ. ಮಾನಸಿಕ ಖಿನ್ನತೆ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಎದುರಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬೈಸಿಕಲ್ ತುಳಿಯುವ ಹವ್ಯಾಸ ಬೆಳೆಸಿಕೊಂಡರೆ ದೈಹಿಕವಾಗಿ ಸದೃಢರಾಗುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಪಡೆಯಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸದಾಶಿವ ರಾಮಚಂದ್ರ ಗೌಡ ಸಲಹೆ ನೀಡಿದರು.
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…
ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…