2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ https://Sevasindhuservices.karnataka.gov.in/sevasindhu/departmentservices ಅರ್ಜಿಗಳನ್ನು ಸಲ್ಲಿಸಲು ಡಿ.20 ರವರೆಗೆ ನಿಗದಿಪಡಿಸಲಾಗಿತ್ತು.
ಮುಂದುವರೆದು ಈ ಅವಧಿಯನ್ನು 2023 ರ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ). ವಿದ್ಯಾರ್ಥಿಯ ಕೋರ್ಸ್ ಪೂರ್ಣಕಾಲಿಕವಾಗಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಕನಿಷ್ಠ ರೂ.6.00/- ಲಕ್ಷಗಳನ್ನು ಮತ್ತು ಗರಿಷ್ಠ ರೂ.15.00/- ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು 2023 ರ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಸಂಪರ್ಕಿಸುವುದು. ಜಿಲ್ಲಾ ಕಚೇರಿ, ದೇವನಹಳ್ಳಿ ದೂರವಾಣಿ ಸಂಖ್ಯೆ-080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-7676905779 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ-8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…