2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ https://Sevasindhuservices.karnataka.gov.in/sevasindhu/departmentservices ಅರ್ಜಿಗಳನ್ನು ಸಲ್ಲಿಸಲು ಡಿ.20 ರವರೆಗೆ ನಿಗದಿಪಡಿಸಲಾಗಿತ್ತು.
ಮುಂದುವರೆದು ಈ ಅವಧಿಯನ್ನು 2023 ರ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ). ವಿದ್ಯಾರ್ಥಿಯ ಕೋರ್ಸ್ ಪೂರ್ಣಕಾಲಿಕವಾಗಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಕನಿಷ್ಠ ರೂ.6.00/- ಲಕ್ಷಗಳನ್ನು ಮತ್ತು ಗರಿಷ್ಠ ರೂ.15.00/- ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು 2023 ರ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಸಂಪರ್ಕಿಸುವುದು. ಜಿಲ್ಲಾ ಕಚೇರಿ, ದೇವನಹಳ್ಳಿ ದೂರವಾಣಿ ಸಂಖ್ಯೆ-080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-7676905779 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ-8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…