2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ https://Sevasindhuservices.karnataka.gov.in/sevasindhu/departmentservices ಅರ್ಜಿಗಳನ್ನು ಸಲ್ಲಿಸಲು ಡಿ.20 ರವರೆಗೆ ನಿಗದಿಪಡಿಸಲಾಗಿತ್ತು.
ಮುಂದುವರೆದು ಈ ಅವಧಿಯನ್ನು 2023 ರ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ). ವಿದ್ಯಾರ್ಥಿಯ ಕೋರ್ಸ್ ಪೂರ್ಣಕಾಲಿಕವಾಗಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಕನಿಷ್ಠ ರೂ.6.00/- ಲಕ್ಷಗಳನ್ನು ಮತ್ತು ಗರಿಷ್ಠ ರೂ.15.00/- ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು 2023 ರ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಸಂಪರ್ಕಿಸುವುದು. ಜಿಲ್ಲಾ ಕಚೇರಿ, ದೇವನಹಳ್ಳಿ ದೂರವಾಣಿ ಸಂಖ್ಯೆ-080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-7676905779 ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ-8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…