ಭಾರತ ಸರ್ಕಾರದ ನಿರ್ದೇಶಕರು, ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆವತಿಯಿಂದ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ನವೆಂಬರ್ 30 ರೊಳಗೆ ಹಾಗೂ ಪೋಸ್ಟ್ ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.
ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಕಲಚೇತನರು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟಲ್ ಮೂಲಕ ದಾಖಲಿಸಬೇಕಾಗಿರುತ್ತದೆ.
9 ಮತ್ತು 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳು NSP Portal ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸಂಬಧಪಟ್ಟ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (ಸಾರ್ವಜನಿಕ ಶಿಕ್ಷಣ ಇಲಾಖೆ) ಇಲಾಖೆಯ ಉಪ ನಿರ್ದೇಶಕರು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರೊಂದಿಗೆ ಸಮನ್ವಯತೆಯನ್ನು ಸಾಧಿಸಿ ಹೆಚ್ಚಿನ ಸಂಖ್ಯೆಯ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ (https://scholarships.gov.in/) ತಾಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…