ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ನಿರ್ದೇಶಕರು, ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆವತಿಯಿಂದ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ನವೆಂಬರ್ 30 ರೊಳಗೆ ಹಾಗೂ ಪೋಸ್ಟ್ ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಕಲಚೇತನರು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟಲ್ ಮೂಲಕ ದಾಖಲಿಸಬೇಕಾಗಿರುತ್ತದೆ.

9 ಮತ್ತು 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳು NSP Portal ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸಂಬಧಪಟ್ಟ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ (ಸಾರ್ವಜನಿಕ ಶಿಕ್ಷಣ ಇಲಾಖೆ) ಇಲಾಖೆಯ ಉಪ ನಿರ್ದೇಶಕರು ಹಾಗೂ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರೊಂದಿಗೆ ಸಮನ್ವಯತೆಯನ್ನು ಸಾಧಿಸಿ ಹೆಚ್ಚಿನ ಸಂಖ್ಯೆಯ ವಿಕಲಚೇತನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ (https://scholarships.gov.in/) ತಾಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ‌, ವಿದ್ಯಾರ್ಥಿನಿಯರು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago